ಸರ್ಕಾರಕ್ಕೆ ಕರ್ತವ್ಯವನ್ನು ನೆನಪಿಸಿ; ಧರ್ಮಸ್ಥಳ ವಿರುದ್ದ ಆಧಾರ ರಹಿತ ಆರೋಪ ಮಾಡುವವರಿಗೆ ಡಿ.31 ರವರೆಗೆ ಕಾಲಾವಕಾಶ ನೀಡಿದ ತೋಂಸೆ ಜಯಕೃಷ್ಣ ಎ. ಶೆಟ್ಟಿ

ಮೂಡುಬಿದ್ರೆ: ಧರ್ಮಸ್ಥಳದ ವಿರುದ್ದದ ಅಪಪ್ರಚಾರದ ಬಗ್ಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೂಡಬಿದ್ರೆಯ ಸಂಪಿಗೆ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿತು. ಈ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ತನ್ನ ಕರ್ತವ್ಯ ಹಾಗೂ ಅಪಪ್ರಚಾರ ಮಾಡುವವರಿಗೆ ಹಾಗೂ ಮಾಡಿದವರಿಗೆ ಸಾಕ್ಷ್ಯಗಳನ್ನು ನೀಡಲು ಡಿ.31ರ ತನಕ ಡೆಡ್ ಲೈನ್ ನೀಡಿದರು.

ಧರ್ಮಸ್ಥಳ ದೇವಸ್ಥಾನ, ಅದರ ಆಡಳಿತ ಮಂಡಳಿ ಅಥವಾ ಅದರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಅತ್ಯಾಚಾರ ಅಥವಾ ಕೊಲೆ ಘಟನೆ, ದೇವಸ್ಥಾನದ ಆವರಣದಲ್ಲಿ ಅಥವಾ ಅದರ ಸುತ್ತಮುತ್ತ ನಡೆದಿದೆಯೆಂದು ಆರೋಪಿಸುತ್ತಿರುವವರು, 31.12.2025ರೊಳಗೆ ಅದಕ್ಕೆ ಸಂಬಂಧಪಟ್ಟ ಸ್ಪಷ್ಟವಾದ ಸಾಕ್ಷ್ಯವನ್ನು ಸಲ್ಲಿಸಬೇಕು. ಒಂದು ವೇಳೆ ಆರೋಪ ಮಾಡುತ್ತಿರುವವರು ಸಾಕ್ಷ್ಯ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಧರ್ಮಸ್ಥಳದ ವಿರುದ್ದ ನಡೆಸುತ್ತಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದುದು ಹಾಗೂ "ಧರ್ಮಸ್ಥಳ ದೇವಸ್ಥಾನ ವಿರುದ್ದ ನಡೆಸುತ್ತಿರುವ ಸುಳ್ಳು ಆರೋಪಗಳ ಪ್ರಕರಣವನ್ನು ಮುಚ್ಚಲಾಗಿದೆ" ಎಂದು ಕರ್ನಾಟಕ ರಾಜ್ಯದ ಗೃಹ ಸಚಿವರು ಅಧಿಕೃತವಾಗಿ ಘೋಷಿಸಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹಿಸಿದೆ.

ಪ್ರಸ್ತುತ ಪೊಲೀಸ್ ಇಲಾಖೆ, ನ್ಯಾಯಾಂಗ, ಕರ್ನಾಟಕ ರಾಜ್ಯದ ಗೃಹ ಸಚಿವರು ಮತ್ತು ಭಾರತದ ಗೃಹ ಸಚಿವರ ಪ್ರಮುಖ ಕರ್ತವ್ಯವೆನೆಂದರೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಅಪಪ್ರಚಾರ ನಡೆಸುತ್ತಿರುವ ಪ್ರತಿಯೊಬ್ಬರಿಂದ ಅವರ ಆರೋಪಗಳಿಗೆ ಸೂಕ್ತವಾದ ಸಾಕ್ಷ್ಯವನ್ನು ಕೇಳಬೇಕು.

ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಕ್ಕೆ ನಾವು ಸ್ಪಷ್ಟವಾಗಿ ಹೇಳುವುದು ಇಷ್ಟೇ – ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವನ್ನು ಕೆಲವರು ಉದ್ದೇಶಪೂರ್ವಕವಾಗಿ ಭಾರತ ಹಾಗೂ ವಿಶ್ವಾದ್ಯಂತ ತಪ್ಪಾಗಿ ಬಿಂಬಿಸುತ್ತಿದ್ದಾರೆ. ಅದ್ದರಿಂದ ಊಹಾಪೋಹಗಳಿಗೆ ಶೀಘ್ರವೇ ತೆರೆ ಎಳೆಯಬೇಕು ಎಂಬುದು ಜಯಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೇಡಿಕೆಯಾಗಿದೆ.

ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೂರು ತಿಂಗಳುಗಳ ಹಿಂದೆ ಮಾಧ್ಯಮಗಳಿಗೆ ತಿಳಿಸಿದ ಪ್ರಕಾರ ಧರ್ಮಸ್ಥಳ ಕ್ಷೇತ್ರದ ವಿರುದ್ದ ಕೆಲವು ದುರುದ್ದೇಶಿತ ಶಕ್ತಿಗಳು ರಾಜಕೀಯ ಮತ್ತು ವೈಯಕ್ತಿಕ ಸ್ವಾರ್ಥಕ್ಕಾಗಿ ಇಲ್ಲ ಸಲ್ಲಾದ ಆರೋಪವನ್ನು ಮಾಡುತ್ತಿದೆ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಕ್ಕೆ ನಾವು ಸ್ಪಷ್ಟವಾಗಿ ಹೇಳುವುದು ಇಷ್ಟೇ – ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವನ್ನು ಕೆಲವರು ಉದ್ದೇಶಪೂರ್ವಕವಾಗಿ ಭಾರತ ಹಾಗೂ ವಿಶ್ವಾದ್ಯಂತ ತಪ್ಪಾಗಿ ಬಿಂಬಿಸುತ್ತಿದ್ದಾರೆ. ಅದ್ದರಿಂದ ಊಹಾಪೋಹಗಳಿಗೆ ಶೀಘ್ರವೇ ತೆರೆ ಎಳೆಯಬೇಕು ಎಂಬುದು ಜಯಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೇಡಿಕೆಯಾಗಿದೆ ಎಂದರು. ಈ ಪ್ರತಿಭಟನಾಕಾರರು ಧರ್ಮಸ್ಥಳ ದೇವಸ್ಥಾನದ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ, ಯಾವ ಕಾರಣಕ್ಕಾಗಿ ಈ ರೀತಿಯ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂಬ ನಿಜವಾದ ಕಾರಣ ಅವರಿಗೆ ಮಾತ್ರ ತಿಳಿದಿದೆ ಎಂದರು.

ಒಂದು ಎನ್.ಜಿ.ಒ ಆಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಆಖಂಡ ಕರ್ನಾಟಕದ ಜನತೆಯಲ್ಲಿ ಮಾಡುತ್ತಿರುವ ವಿನಂತಿಯೆನೆಂದರೆ ಯಾರೂ ಕೂಡ ಈ ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸುತ್ತಿರುವ ಈ ಸುಳ್ಳು ಅಪಪ್ರಚಾರವನ್ನು ನಂಬಬಾರದು. ಧರ್ಮಸ್ಥಳ ದೇವಸ್ಥಾನವು ಭಾರತದ ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿದ್ದು, ಕರ್ನಾಟಕದ ಭಕ್ತರು ಕಳೆದ 1000 ವರ್ಷಗಳಿಂದ ಈ ಕ್ಷೇತ್ರದ ಮೇಲೆ ಅಚಲವಾದ ನಂಬಿಕೆಯನ್ನು ಹೊಂದಿದ್ದಾರೆ. ಈ ನಂಬಿಕೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು.

ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಯೋಜಕ ಜಗದೀಶ ಅಧೀಕಾರಿ, ಜಿಲ್ಲಾ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡೋನ್ ಮತ್ತಿತರರು ಉಪಸ್ಥಿತರಿದ್ದರು.


Post a Comment

0 Comments