ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಒಲವು ಮೂಡಿಸುವಲ್ಲಿ ನಿಟ್ಟಿನಲ್ಲಿ ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸಾಹಿತ್ಯಿಕ ಸಂಘ ‘ಮೆಟಾಫೋರಿಯಾ’ದ ಉದ್ಘಾಟನೆ ಸಮಾರಂಭ ಕಾಲೇಜಿನ ಆಡಿಯೋ–ವಿಜುವಲ್ ಹಾಲ್ನಲ್ಲಿ ಶುಕ್ರವಾರ ನಡೆಯಿತು.
‘ಮೆಟಾಫೋರಿಯಾ’ ಸಾಹಿತ್ಯಿಕ ಸಂಘ ಉದ್ಘಾಟನೆ ಮಾಡಿ ಮಾತನಾಡಿದ ಆಳ್ವಾ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ಆಳ್ವ "ಇಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಉದ್ದೀಪನಗೊಳಿಸಲು ಸಹಕಾರಿಯಾಗುತ್ತದೆ ಹಾಗೂ ಸಾರ್ವಜನಿಕ ಭಾಷಣ ಕೌಶಲ್ಯ ಕೇವಲ ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಅದು ಅಭ್ಯಾಸದಿಂದ ರೂಢಿಸಿಕೊಳ್ಳಬಹುದಾದ ಗುಣ ಎಂದರು.
ಪುಸ್ತಕಗಳ ಬಿಡುಗಡೆ:
ಇದೇ ಸಂಧರ್ಭದಲ್ಲಿ ವಿಭಾಗದ ಹೊಸ ಪಠ್ಯಪುಸ್ತಕಗಳಾದ 'ಇಕ್ವಿಟಿ', 'ಪೆನಾಂಬ್ರ' ಮತ್ತು 'ರೆಸೊನೆನ್ಸ್ಸ್' ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ಟಿ.ಕೆ. ರವೀಂದ್ರನ್ ವಹಿಸಿದ್ದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಜುಲಿಯನಾ ರೋಡ್ರಿಗಸ್, ಪದವಿ ವಿಭಾಗದ ಸಂಯೋಜಕಿ ಚಂದ್ರಿಕಾ ಶೆಟ್ಟಿಗಾರ್ ಹಾಗೂ ಕಾರ್ಯಕ್ರಮ ಸಂಯೋಜಕ ರವಿ ಶೆಣೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಹುಮಾನ ವಿತರಣೆ:
ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪದ್ಯ ರಚನೆ ಸ್ಪರ್ಧೆಯಲ್ಲಿ ಪ್ರೇರಣಾ ಜೈನ್(ದ್ವಿತೀಯ ಬಿಎಸ್ಸಿ ಎಫ್ಎನ್ಡಿ) ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನ ಪಡೆದ ಇನ್ಶರಾಯಿ ಈಯಾಸಿ ವಾಂಖಾರ್(ದ್ವಿತೀಯ ಎಂಎಸ್ಡಬ್ಲ್ಯು) ವಿಜೇತರಿಗೆ ನಗದು ಬಹುಮಾನವನ್ನು ವಿತರಿಸಿದರು. ನಿಯಾತಿ ಅಮೀನ್ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ವಿಲ್ಟನ್ ರೋಡ್ರಿಗಸ್ ವಂದಿಸಿದರು.